CM DK Shivakumar Press Meet: ನನಗೆ ಇತಿಹಾಸ ಮುರಿಯೋದ್ರಲ್ಲಿ ಆಸಕ್ತಿ ಇಲ್ಲ, ಇತಿಹಾಸ ನಿರ್ಮಿಸೋದ್ರಲ್ಲಿ ನಂಬಿಕೆ ಇದೆ ಎಂದ ಡಿಕೆ..!

ಹಂಚಿಕೊಳ್ಳಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಭರ್ಜರಿ ಚುರುಕು ಮುಟ್ಟಿಸಿರುವ ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು, ಇಂದು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಮೊದಲ ಜಂಟಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಹೊಸ ಸರ್ಕಾರದ ಆಡಳಿತದ ದಿಕ್ಕನ್ನು ಸ್ಪಷ್ಟಪಡಿಸಿದ್ದಾರೆ. “ಇಂದಿನಿಂದಲೇ ನಾವು ಅಧಿಕೃತವಾಗಿ ಕೆಲಸ ಪ್ರಾರಂಭಿಸಿದ್ದೇವೆ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದೇವೆ” ಎಂದು ಸಿಎಂ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅತ್ಯಂತ ಗಂಭೀರವಾಗಿ ಮಾತನಾಡಿದ ಸಿಎಂ ಡಿಕೆಶಿ, “ನನಗೆ ಹಳೆಯ ಇತಿಹಾಸವನ್ನು ಮುರಿಯುವುದರಲ್ಲಿ ಯಾವುದೇ ಆಸಕ್ತಿ ಇಲ್ಲ. ಇತಿಹಾಸ ಬ್ರೇಕ್ ಮಾಡುವುದಕ್ಕಿಂತಲೂ, ಹೊಸ ಇತಿಹಾಸವನ್ನು ನಿರ್ಮಿಸುವುದರಲ್ಲಿ ನನಗೆ ಬಲವಾದ ನಂಬಿಕೆ ಇದೆ. ವಿದ್ಯಾವಂತರು ಅಥವಾ ಬುದ್ಧಿವಂತರು ಇಲ್ಲದಿದ್ದರೂ ದೇಶ ನಡೆಯಬಹುದು, ಆದರೆ ಪ್ರಜ್ಞಾವಂತರು ಇಲ್ಲದೆ ಯಾವುದೇ ಕೆಲಸ ಸುಗಮವಾಗಿ ನಡೆಯಲು ಸಾಧ್ಯವಿಲ್ಲ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಜೊತೆಗೆ, “ನಮ್ಮ ಹೊಸ ಸರ್ಕಾರ ಯಾವುದೇ ಜಾತಿ ಅಥವಾ ಧರ್ಮಕ್ಕೆ ಮಣಿಯುವುದಿಲ್ಲ” ಎಂದು ಸಾಮಾಜಿಕ ಸಮಾನತೆಯ ಕಠಿಣ ಸಂದೇಶ ರವಾನಿಸಿದ್ದಾರೆ.

ಅಧಿಕಾರಿಗಳಿಗೆ ಸಂಪೂರ್ಣ ಆಡಳಿತಾತ್ಮಕ ಸ್ವಾತಂತ್ರ್ಯದ ಭರವಸೆ ನೀಡಿದ ಸಿಎಂ, “ಯಾವುದೇ ರೀತಿಯ ಬಾಹ್ಯ ಒತ್ತಡಗಳಿಗೆ ಅಧಿಕಾರಿಗಳು ಮಣಿಯಬಾರದು. ಯಾರ ಮಾತುಗಳನ್ನೂ ಕೇಳದೆ, ಕೇವಲ ಕಾನೂನು ಮತ್ತು ನಿಯಮಾವಳಿಗಳ ಪ್ರಕಾರವೇ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಹೊಸ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗಲಿದೆ ಮತ್ತು ಅಧಿಕಾರಿಗಳಿಂದ ನಾವೇನು ನಿರೀಕ್ಷೆ ಮಾಡುತ್ತಿದ್ದೇವೆ ಎಂಬುದನ್ನು ಇಂದಿನ ಮೊದಲ ಸಭೆಯಲ್ಲೇ ಮನವರಿಕೆ ಮಾಡಿಕೊಟ್ಟಿದ್ದೇನೆ” ಎಂದಿದ್ದಾರೆ.

ತಾಲ್ಲೂಕುಗಳಿಗೂ ಭೇಟಿ ನೀಡಿ; 15 ದಿನಗಳ ‘ಆಕ್ಷನ್ ಪ್ಲಾನ್’ ಡೆಡ್‌ಲೈನ್!

ಆಡಳಿತವನ್ನು ಕೇವಲ ಕಚೇರಿಗಳಿಗೆ ಸೀಮಿತಗೊಳಿಸದಂತೆ ಸೂಚಿಸಿರುವ ಸಿಎಂ ಡಿಕೆಶಿ, “ಅಧಿಕಾರಿಗಳು ಕೇವಲ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಕುಳಿತುಕೊಳ್ಳಬಾರದು. ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೂ ಭೇಟಿ ನೀಡಿ ಸ್ಥಳೀಯ ಜನರ ಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕು” ಎಂದು ಆದೇಶಿಸಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಅತ್ಯಂತ ಮುಖ್ಯ ಎಂದಿರುವ ಸಿಎಂ, ಮುಂದಿನ 15 ದಿನಗಳ ಒಳಗಾಗಿ ರಾಜ್ಯದ ಎಲ್ಲಾ ಇಲಾಖೆಗಳು ತಮ್ಮ ಕಾರ್ಯವೈಖರಿಯ ಸಮಗ್ರ ‘ಆಕ್ಷನ್ ಪ್ಲಾನ್’ (Action Plan) ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಗಡುವು ವಿಧಿಸಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds