ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾ*ವು..!

ಹಂಚಿಕೊಳ್ಳಿ

ಬೆಂಗಳೂರು: ರಾಜಧಾನಿಯ ಅತ್ಯಂತ ಬ್ಯುಸಿ ರಸ್ತೆಗಳಲ್ಲಿ ಒಂದಾದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದ (Goraguntepalya) ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್‌ನಲ್ಲಿದ್ದ ಓರ್ವ ಮಹಿಳೆ ಹಾಗೂ ಪುರುಷ ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ, ಗೊರಗುಂಟೆಪಾಳ್ಯದ ಪ್ರಮುಖ ಟಿಎಂಟಿ (TMT) ಜಂಕ್ಷನ್ ಬಳಿ ಈ ದುರಂತ ನಡೆದಿದೆ. ಮೃತರಾದ ಇಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿಕೊಂಡು ವೇಗವಾಗಿ ಬಂದ ಗೂಡ್ಸ್ ಲಾರಿಯೊಂದು ಇವರ ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಉರುಳಿ ಬಿದ್ದಿದ್ದು, ಲಾರಿಯ ಚಕ್ರಗಳು ಇವರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಇಡೀ ಜಂಕ್ಷನ್‌ನಲ್ಲಿ ಭಾರಿ ಜನಜಂಗುಳಿ ಜಮಾಯಿಸಿದ್ದು, ಕೆಲಕಾಲ ಸಂಚಾರ ದಟ್ಟಣೆ (Traffic Jam) ಉಂಟಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಯಶವಂತಪುರ ಸಂಚಾರ ಪೊಲೀಸ್ ಠಾಣೆಯ (Yeshwanthpur Traffic Police) ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅಪಘಾತಕ್ಕೆ ಕಾರಣವಾದ ಗೂಡ್ಸ್ ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Advertisement


This will close in 3 seconds