ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ವಾಹನ ಸವಾರ ಪಾರು ….!!!

ಹಂಚಿಕೊಳ್ಳಿ

ಶಿರಸಿ: ಕುಮಟಾ ರಸ್ತೆಯ ದೇವಿಮನೆ ಘಟ್ಟದಲ್ಲಿರುವ ದೇವಿ ದೇವಸ್ಥಾನದ ಸಮೀಪ ಶುಕ್ರವಾರ ಸಂಜೆ ಸುಮಾರಿಗೆ ಗುಡ್ಡ ಕುಸಿದ ಪರಿಣಾಮ ಬೈಕ್ ಸವಾರನೊಬ್ಬ ಸಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ರಸ್ತೆ ಮೇಲೆ ಗಿಡಮರಗಳು ಉರುಳಿ ಬಿದ್ದ ಘಟನೆ ನಡೆದಿದೆ.



ಗುಡ್ಡ ಕುಸಿತದಿಂದ ರಸ್ತೆ ಮೇಲೆ ಮಣ್ಣು ಹಾಗೂ ಗಿಡಮರಗಳು ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತಾತ್ಕಾಲಿಕ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ರಸ್ತೆ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಘಟನೆ
ಸಂಜೆ ಸುಮಾರು 5.45 ಗಂಟೆ ವೇಳೆಗೆ ನಡೆದಿದೆ.

Leave a Reply

Your email address will not be published. Required fields are marked *

Advertisement


This will close in 3 seconds