ಗೋಕರ್ಣ: ಪವಿತ್ರ ಗೋಕರ್ಣ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯ ಅನ್ನಬ್ರಹ್ಮ ಚಾತುರ್ಮಾಸ್ಯ ವ್ರತದ ಮಂಗಳಕರ ಸಂದರ್ಭದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿದ ಶಾಸಕ ಭೀಮಣ್ಣ ನಾಯ್ಕ ಶ್ರೀಗಳ ದಿವ್ಯ ದರ್ಶನ ಪಡೆದು ಗುರುವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳ ಆಶೀರ್ವಾದ ಪಡೆದು, ಕ್ಷೇತ್ರ ಹಾಗೂ ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವಾಂಗೀಣ ಒಳಿತನ್ನು ಕರುಣಿಸಲಿ ಎಂದು ಶಾಸಕ ಭೀಮಣ್ಣ ನಾಯ್ಕ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಎಸ್.ಕೆ. ಭಾಗವತ್ ಉಪಸ್ಥಿತರಿದ್ದರು.















Leave a Reply