ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್, ಮೇಲ್ಮನೆ ಅಖಾಡ ರೋಚಕ!

ಹಂಚಿಕೊಳ್ಳಿ

ಬೆಂಗಳೂರು: ಇದೇ ಜೂನ್ 18 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ತನ್ನ 5 ನೇ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಿದೆ. ಕೆಪಿಸಿಸಿ ಖಜಾಂಚಿಯಾಗಿರುವ ವಿನಯ್ ಕಾರ್ತಿಕ್ ಅವರನ್ನು ಅಖಾಡಕ್ಕಿಳಿಸಲು ಪಕ್ಷ ನಿರ್ಧರಿಸಿದ್ದು, ಈ ಮೂಲಕ ಮೇಲ್ಮನೆ ಚುನಾವಣೆಗೆ ಮತದಾನ ನಡೆಯುವುದು ಬಹುತೇಕ ಖಚಿತವಾದಂತಾಗಿದೆ.

ಕಾಂಗ್ರೆಸ್ ಪಕ್ಷವು ಈಗಾಗಲೇ 4 ಅಭ್ಯರ್ಥಿಗಳನ್ನು ಘೋಷಿಸಿತ್ತು, ಆದರೆ ಅಂತಿಮ ಹಂತದ ತಂತ್ರಗಾರಿಕೆಯ ಭಾಗವಾಗಿ 5 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೂರದ ಸಂಬಂಧಿಯೂ ಆಗಿರುವ ಯುವ ನಾಯಕ ವಿನಯ್ ಕಾರ್ತಿಕ್ ಅವರನ್ನು ಕಣಕ್ಕಿಳಿಸಲಾಗಿದೆ. ಯುವ ಕಾಂಗ್ರೆಸ್ ಮುಖಂಡರಾಗಿ ಕಾರ್ಯನಿರ್ವಹಿಸಿರುವ ಕಾರ್ತಿಕ್, ಪಕ್ಷದ ಸಾಂಸ್ಥಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ವಿಧಾನ ಪರಿಷತ್ತಿಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು:

  • ಬಿ.ಕೆ. ಹರಿಪ್ರಸಾದ್
  • ಪಿ.ವಿ. ಮೋಹನ್
  • ತಿಪ್ಪಣ್ಣಪ್ಪ ಕಮಕನೂರು
  • ಮಳವಳ್ಳಿ ಶಿವಣ್ಣ
  • ವಿನಯ್ ಕಾರ್ತಿಕ್

ಲೆಕ್ಕಾಚಾರ ಬದಲಿಸಲಿರುವ ಮೈತ್ರಿಕೂಟದ ನಡೆ?

ಒಟ್ಟು 7 ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು 2 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಿದೆ. ಕಾಂಗ್ರೆಸ್ 5 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಅಡ್ಡಮತದಾನದ ಭೀತಿ ಎದುರಾಗಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು 3 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಹಸಕ್ಕೆ ಕೈಹಾಕಿದರೆ, ಜೂನ್ 18 ರಂದು ನಡೆಯುವ ಮತದಾನ ಪ್ರಕ್ರಿಯೆಯು ತೀವ್ರ ರೋಚಕತೆ ಪಡೆದುಕೊಳ್ಳಲಿದೆ.

Leave a Reply

Your email address will not be published. Required fields are marked *

Advertisement


This will close in 3 seconds