CM ಕಚೇರಿಗೆ ಮತ್ತೊಬ್ಬ ಆಪ್ತನ ಎಂಟ್ರಿ: ಮುಖ್ಯಮಂತ್ರಿ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ನೇಮಕ

ಹಂಚಿಕೊಳ್ಳಿ

ರಾಜ್ಯಸಭೆ ಸದಸ್ಯ ಹಾಗೂ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷರಾಗಿದ್ದ ಜಿ.ಸಿ. ಚಂದ್ರಶೇಖರ್ ಅವರು ಮುಖ್ಯಮಂತ್ರಿ ಕಚೇರಿಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ತಮ್ಮ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಸಿ. ಚಂದ್ರಶೇಖರ್ ಅವರನ್ನು ತಮ್ಮ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿಎಂ ಕಚೇರಿಯಲ್ಲಿ ಮತ್ತೊಬ್ಬ ಆಪ್ತನಿಗೆ ಮಹತ್ವದ ಸ್ಥಾನಮಾನ ಲಭಿಸಿದಂತಾಗಿದೆ.

ರಾಜಕೀಯ ವ್ಯವಹಾರ ಹಾಗೂ ಕುಂದುಕೊರತೆಗಳ ನಿರ್ವಹಣೆ

​ಜಿ.ಸಿ. ಚಂದ್ರಶೇಖರ್ ಅವರು ಮುಖ್ಯಮಂತ್ರಿಯವರಿಗೆ ಪ್ರಮುಖವಾಗಿ ರಾಜಕೀಯ ವ್ಯವಹಾರಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅಗತ್ಯ ನೆರವು ಹಾಗೂ ಸಲಹೆಗಳನ್ನು ನೀಡಲಿದ್ದಾರೆ. ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಯಾವುದೇ ಭತ್ಯೆಗಳಿಲ್ಲದ ಸಂಪೂರ್ಣ ಗೌರವಾಧಾರಿತ ಹುದ್ದೆ

​ಈ ನೇಮಕಾತಿಯು ಸಂಪೂರ್ಣವಾಗಿ ಗೌರವಾಧಾರಿತ (Pro Bono) ಆಧಾರದ ಮೇಲೆ ನಡೆದಿದೆ ಎಂಬುದು ಗಮನಾರ್ಹ. ಈ ಹುದ್ದೆ ನಿಭಾಯಿಸುವುದಕ್ಕಾಗಿ ಜಿ.ಸಿ. ಚಂದ್ರಶೇಖರ್ ಅವರು ಸರ್ಕಾರದಿಂದ ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಅಧಿಕೃತ ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

Advertisement


This will close in 3 seconds